ರಾಜಮನೆತನದಿಂದ ರಾಜಕೀಯದತ್ತ; ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಒಡೆಯರ್ ವ್ಯಕ್ತಿಚಿತ್ರಣ
ಭಾರತ, ಮಾರ್ಚ್ 13 -- ಮೈಸೂರು: ರಾಜ್ಯದ ಪ್ರತಿಷ್ಠಿತ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ರಾಜವಂಶಸ್ಥ ಯದವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಹಿರಿಯ ಸಹೋದರಿ ದಿವಂಗತ ಗಾಯತ್ರಿದೇವಿ ಮತ್ತು ದಿವಂಗತ ರಾಮಚಂದ್ರ ಅರಸ್ರ ಪುತ್ರಿಯಾಗಿರುವ ತ್ರಿಪುರಸುಂದರಿದೇವಿ ಮತ್ತು ಸ್ವರೂಪ್ ಗೋಪಾಲ ರಾಜೇ ಅರಸ್ ಅವರ ಪುತ್ರರಾಗಿ 1992ರ ಮಾರ್ಚ್ 24ರಂದು ಜನಿಸಿದರು. ಯದುವೀರ್ ಅವರಿಗೆ ಸೋದರಿ ಜಯಾತ್ಮಿಕಾ ಇದ್ದಾರೆ.
ಯದುವೀರ್ ಬೆಂಗಳೂರಿನ ವಿದ್ಯಾನಿಕೇತನ್ ಶಿಕ್ಷಣ ಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ಮುಗಿಸಿದ ನಂತರ ಕೆನೆಡಿಯನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ದ್ವಿತೀಯ ಪಿಯುಸಿವರೆಗೆ ವ್ಯಾಸಂಗ ಮಾಡಿದ್ದಾರೆ. ಅಮೆರಿಕದ ಬಾಸ್ಟನ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಮತ್ತು ಆಂಗ್ಲಭಾಷೆಯ ವಿಷಯಗಳಲ್ಲಿ ಬಿಎ ಪದವಿ ಪಡೆದುಕೊಂಡಿದ್ದಾರೆ. ಯದುವೀರ್ ಅವರ ಮೊದಲ ಹೆಸರು ಯದುವೀರ್ ಗೋಪಾಲರಾಜೇ ಅರಸ್ ಎಂದು ಇತ್ತು. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್...
Click here to read full article from source
To read the full article or to get the complete feed from this publication, please
Contact Us.