Bangalore Crime: ಬೆಂಗಳೂರಲ್ಲಿ ವಾಯುವಿಹಾರ ಹೊರಟಿದ್ದ ದಂಪತಿ ಮೇಲೆ ಹಲ್ಲೆ, ನಾಲ್ವರು ಆರೋಪಿಗಳು ಪರಾರಿ
Bengaluru, ಮೇ 2 -- ಬೆಂಗಳೂರು: ದಂಪತಿಗಳ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳು ಹೊಯ್ಸಳ ಗಸ್ತು ವಾಹನ ಆಗಮಿಸುತ್ತಿದ್ದಂತೆ ಪರಾರಿಯಾದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ವಿಶಾಲ್ ತಿವಾರಿ ಮತ್ತು ಅವರ ಪತ್ನಿ ವಿರುಪಾಕ್ಷಪುರದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆಗ ನಾಲ್ವರು ಕಿಡಿಗೇಡಿಗಳು ತಿವಾರಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದ ಪತ್ನಿಗೂ ಕಿರುಕುಳ ನೀಡಿದ್ದಾರೆ ಎಂದು ತಿಳಿದು ಬಂದಿದೆ. ವಿಶಾಲ್ ತಿವಾರಿ ದಂಪತಿಗಳು ತಮ್ಮ ಪಾಡಿಗೆ ತಾವು ಹೋಗುತ್ತಿದ್ದಾಗ ನಾಲ್ವರು ಕಿಡಿಗೇಡಿಗಳು ಅಡ್ಡಗಟ್ಟಿ ಹಲ್ಲೆ ಮಾಡಿ ಬೆದರಿಕೆಯೊಡ್ಡಿದ್ದಾರೆ. ವಿಶಾಲ್ ಅವರು ತುರ್ತು ಸಹಾಯಕ್ಕಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಅವರ ಪತ್ನಿಗೂ ಆರೋಪಿಗಳು ಕಿರುಕುಳ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ದೂರು ನೀಡುವಂತೆ ಸಂತ್ರಸ್ತ ದಂಪತಿಯನ್ನು ಕೋರಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕೆಲವೇ ನಿಮಿಷಗಳಲ್ಲಿ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದ...
Click here to read full article from source
To read the full article or to get the complete feed from this publication, please
Contact Us.