ಭಾರತ, ಮೇ 2 -- ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಈ ವಾರ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಸಿನಿಮಾಗಳು ರಿಲೀಸ್‌ ಆಗುತ್ತಿಲ್ಲ. ಆದರೆ, ಬಿಡುಗಡೆಯಾಗುತ್ತಿರುವುದು ಎರಡೇ ಎರಡು ಸಿನಿಮಾಗಳಾಗಿದ್ದರೂ, ಈ ಎರಡು ಸಿನಿಮಾಗಳು ನಿರೀಕ್ಷೆ ಹೆಚ್ಚಿಸಿವೆ. ಆದಿತ್ಯ ನಟನೆಯ ಕಾಂಗಾರೂ ಮತ್ತು ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಾಜೀವ್‌ ಹನು ನಟನೆಯ ಉಸಿರೇ ಉಸಿರೇ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಉಸಿರೇ ಉಸಿರೇ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಿಚ್ಚ ಸುದೀಪ್‌ ನಟಿಸಿದ್ದಾರೆ.

ಆದಿತ್ಯ ನಾಯಕ ನಟನಾಗಿ ನಟಿಸಿರುವ ಕಾಂಗರೂ ಸಿನಿಮಾ ಈ ಶುಕ್ರವಾರ ಬಿಡುಗಡೆಯಾಗುತ್ತದೆ. ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕಿಶೋರ್ ಮೇಗಳಮನೆ ನಿರ್ದೇಶನದಲ್ಲಿ ಈ ಸಿನಿಮಾ ನಿರ್ಮಿಸಲಾಗಿದೆ. ಚೆನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್‌ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲಾರ ಮಂಡ್ಯ ಹಾಗೂ ಕೆ.ಜಿ.ಆರ್.ಗೌಡ ಎಂಬ ಸ್ನೇಹಿತರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಕಾಂಗರೂ ಸಿನಿಮಾದಲ್ಲಿ ಆದಿತ್ಯ ಅವರಿಗೆ ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿ...