Uttarpradesh, ಮೇ 2 -- ದೆಹಲಿ: ಕರ್ನಾಟಕದಲ್ಲಿ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಸಂಸದ ಹಾಗೂ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿರುದ್ದ ಮೊಕದ್ದಮೆ ದಾಖಲಾಗಿ ದೇಶ ಬಿಟ್ಟು ಪರಾರಿಯಾಗಿರುವ ಪ್ರಕರಣದ ವಿವಾದದ ನಡುವೆಯೇ, ಭಾರತೀಯ ಜನತಾಪಕ್ಷವು ಇಂತಹುದೇ ಆರೋಪ ಎದುರಿಸುತ್ತಿದ್ದ ತಮ್ಮದೇ ಪಕ್ಷದ ಸಂಸದನ ಬದಲು ಮಗನಿಗೆ ಟಿಕೆಟ್‌ ನೀಡಿದೆ. ಈ ಮೂಲಕ ಗಂಭೀರ ಆರೋಪ ಎದುರಿಸುತ್ತಿದ್ದ ಆರೋಪಿ ಬದಲು ಮಗನಿಗೆ ಟಿಕೆಟ್‌ ನೀಡುವ ಮೂಲಕ ಕುಟುಂಬ ರಾಜಕಾರಣಕ್ಕೂ ಒತ್ತು ನೀಡಿದೆ.

ಉತ್ತರ ಪ್ರದೇಶದ ಕೈಸರಗಂಜ್‌ (Kaiserganj ) ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕರಣ್‌ ಭೂಷಣ್‌ ಸಿಂಗ್‌ ಅವರ ಹೆಸರನ್ನು ಬಿಜೆಪಿ ಸಂಸದೀಯ ಮಂಡಳಿ ಅಂತಿಮಗೊಳಿಸಿ ಹೆಸರನ್ನು ಪ್ರಕಟಿಸಿದೆ. ಕರಣ್‌ ಸಿಂಗ್‌ ಅವರು ಭಾರತೀಯ ಕುಸ್ತಿ ಫೆಡರೇಷನ್‌ನ ರಾಷ್ಟ್ರೀಯ ಅಧ್ಯಕ್ಷಾಗಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ಪುತ್ರ.

ಬ್ರಿಜ್‌ ಭೂಷಣ್‌ ಸಿಂಗ್‌ ಅವರು ಹಲವಾರು ಕುಸ್ತಿ ಪಟುಗಳಿಗೆ ಲೈಂಗಿಕವಾಗಿ ದೌರ್ಜನ್ಯವೆಸಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿ...