Sathyam: ಸತ್ಯಂ ಚಿತ್ರದಲ್ಲಿ ತುಳುನಾಡ ದೈವದ ಕಥೆ; ಸೆನ್ಸಾರ್ ಪಾಸ್, ಶೀಘ್ರದಲ್ಲಿ ಚಿತ್ರಮಂದಿರದಲ್ಲಿ 'ಗಣಪ'ನ ಸಿನಿಮಾ
ಭಾರತ, ಮೇ 5 -- Sathyam: ನಿರ್ದೇಶಕ ಅಶೋಕ್ ಕಡಬ ಇದೀಗ 'ಸತ್ಯಂ' ಚಿತ್ರದ ಮೂಲಕ ಮತ್ತೊಂದು ಜಾಡಿನತ್ತ ಹೊರಳಿಕೊಂಡಿರುವ ಸ್ಪಷ್ಟ ಸೂಚನೆಯೊಂದು ಸಿಕ್ಕಿದೆ. ಈ ಹಿಂದೆ ಸತ್ಯಂ ಟೀಸರ್ ಬಿಡುಗಡೆಯಾದಾಗಲೇ ಅದು ಸ್ಪಷ್ಟವಾಗಿತ್ತು. ಆ ಟೀಸರ್ಗೆ ಮಿಲಿಯನ್ನುಗಟ್ಟಲೆ ವೀಕ್ಷಣೆಗಳು ಸಿಕ್ಕಿ, ಎಲ್ಲ ಕಡೆಗಳಿಂದಲೂ ಮೆಚ್ಚುಗೆಗಳೂ ಹರಿದು ಬಂದಿದ್ದವು. ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿರುವ ಸತ್ಯಂ ಸಿನಿಮಾ ಸೆನ್ಸಾರ್ ಸರ್ಟಿಫಿಕೇಟ್ ಪಡೆದುಕೊಂಡಿದೆ. ಈ ವಿಚಾರವನ್ನು ನಿರ್ಮಾಪಕರಾದ ಮಹಾಂತೇಶ್ ವಿ.ಕೆ ಹಂಚಿಕೊಂಡಿದ್ದಾರೆ. ಯುಎ ಸರ್ಟಿಫಿಕೇಟಿನೊಂದಿಗೆ, ಸೆನ್ಸಾರ್ ಅಧಿಕಾರಿಗಳ ತುಂಬು ಮೆಚ್ಚುಗೆಯೂ ಸಿಕ್ಕಿದ್ದಕ್ಕೆ ಚಿತ್ರತಂಡ ಖುಷಿಯಲ್ಲಿದೆ.
ಇದು ಗಣಪ ನಂತರ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಚಿತ್ರ. ಸೀರಿಯಲ್ ಸಿನಿಮಾಗಳಲ್ಲಿ ಬಿಜಿಯಾಗಿರುವ ರಂಜಿನಿ ರಾಘವನ್ ಈ ಚಿತ್ರದ ನಾಯಕಿ. ಈ ಹಿಂದಿನ ರಂಗಿತರಂಗ, ಕಾಂತಾರ ಸಿನಿಮಾಗಳಲ್ಲಿ ತುಳುನಾಡ ದೈವಾರಾಧನೆ ಇತ್ತು. ಆ ನೆಲದ ಘಮಲಿನ ಕಥೆಯನ್ನೊಳಗೊಂಡಿರುವ ಚಿತ್ರ 'ಸತ್ಯಂ'. ಹಾಗೆಂದ ಮಾತ್ರಕ್...
Click here to read full article from source
To read the full article or to get the complete feed from this publication, please
Contact Us.